ಬ್ರೇಕಿಂಗ್ ನ್ಯೂಸ್
07-10-20 02:22 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 07: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತ ಯುವತಿ ನಿರಂತರ ಸಂಪರ್ಕದಲ್ಲಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 14 ರಂದು ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿ. ಈತನ ಜೊತೆ ಸಂತ್ರಸ್ತೆ ಯುವತಿ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಕಾಲ್ ಡಿಟೈಲ್ಸ್ ನಲ್ಲಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿ ಜೊತೆಗೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಫೋನ್ ನಿಂದ ಆರೋಪಿ ಸಂದೀಪ್ ಗೆ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿದ್ದವು. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ. ಎರಡು ಫೋನ್ ನಂಬರ್ ಗಳ ನಡುವೆ, ಒಟ್ಟು 104 ಬಾರಿ ಸಂಪರ್ಕ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm