ಬ್ರೇಕಿಂಗ್ ನ್ಯೂಸ್
            
                        07-10-20 02:22 pm Headline Karnataka News Network ಕ್ರೈಂ
            ಲಕ್ನೋ, ಅಕ್ಟೋಬರ್ 07: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತ ಯುವತಿ ನಿರಂತರ ಸಂಪರ್ಕದಲ್ಲಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 14 ರಂದು ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿ. ಈತನ ಜೊತೆ ಸಂತ್ರಸ್ತೆ ಯುವತಿ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಕಾಲ್ ಡಿಟೈಲ್ಸ್ ನಲ್ಲಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿ ಜೊತೆಗೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಫೋನ್ ನಿಂದ ಆರೋಪಿ ಸಂದೀಪ್ ಗೆ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿದ್ದವು. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ. ಎರಡು ಫೋನ್ ನಂಬರ್ ಗಳ ನಡುವೆ, ಒಟ್ಟು 104 ಬಾರಿ ಸಂಪರ್ಕ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm