ಬ್ರೇಕಿಂಗ್ ನ್ಯೂಸ್
07-10-20 02:22 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 07: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತ ಯುವತಿ ನಿರಂತರ ಸಂಪರ್ಕದಲ್ಲಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 14 ರಂದು ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿ. ಈತನ ಜೊತೆ ಸಂತ್ರಸ್ತೆ ಯುವತಿ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಕಾಲ್ ಡಿಟೈಲ್ಸ್ ನಲ್ಲಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿ ಜೊತೆಗೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಫೋನ್ ನಿಂದ ಆರೋಪಿ ಸಂದೀಪ್ ಗೆ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿದ್ದವು. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ. ಎರಡು ಫೋನ್ ನಂಬರ್ ಗಳ ನಡುವೆ, ಒಟ್ಟು 104 ಬಾರಿ ಸಂಪರ್ಕ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm