ಬ್ರೇಕಿಂಗ್ ನ್ಯೂಸ್
05-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಸಹಿತ ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಾ ನಿವಾಸಿ ಸುಜಿತ್ ಶೆಟ್ಟಿ (40), ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತರು. ಕಳೆದ ಆಗಸ್ಟ್ ತಿಂಗಳಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರ ಸುಲಿಗೆ ಪ್ರಕರಣ, ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.
ಆ.14ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನ ಆಗಿತ್ತು. ಅನಂತರ ಆ.24 ರಂದು ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಫ್ಯಾಕ್ಟರಿಯ ರಸ್ತೆಯಲ್ಲಿ ಮಹಿಳೆಯ ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಆ.25 ರಂದು ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯ ಶಕ್ತಿನಗರದ ರಾಜೀವ ನಗರದಲ್ಲಿ ಮಹಿಳೆ ಸರವನ್ನು ಸುಲಿಗೆ ಮಾಡಲಾಗಿತ್ತು.
ಕೃತ್ಯದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿದ್ದರು. ಜುವೆಲ್ಲರಿಗೆ ಬಂದಿದ್ದ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
Mangalore Three robbers held for snatching gold and selling it to gold smith.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm