ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm