ಬ್ರೇಕಿಂಗ್ ನ್ಯೂಸ್
12-09-22 01:15 pm HK News Desk ಕ್ರೈಂ
ಲಕ್ನೋ, ಸೆ.12: ಹಿಂದುಳಿದ ವರ್ಗದ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ 19 ವರ್ಷದ ತನ್ನ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೈಶಾಚಿಕ ಘಟನೆ ನಡೆದಿದೆ.
ಆರೋಪಿ ತಂದೆ ಪ್ರಮೋದ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಗಳನ್ನು ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹಕ್ಕೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮೋದ್ ಕುಮಾರ್ ಮೇಲ್ಜಾತಿಯ ವ್ಯಕ್ತಿಯಾಗಿದ್ದು ಆತನ ಮಗಳು 19 ವರ್ಷದ ಕಾಜಲ್, ಅದೇ ಊರಿನ ಹಿಂದುಳಿದ ಜಾತಿಯ ಯುವಕ ಅಜಯ್ ಕಶ್ಯಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಂದೆ ಬೈದು ಬುದ್ಧಿ ಹೇಳಿದರೂ, ಸಂಬಂಧ ಕಡಿದುಕೊಳ್ಳಲು ನಿರಾಕರಿಸಿದ್ದಳು. ಅಲ್ಲದೆ, ಅಜಯ್ ಕಶ್ಯಪ್ ಜೊತೆಗೆ ಕಾಜಲ್ ತನ್ನ ಮನೆಯವರಿಗೆ ತಿಳಿಸದೆ ಮನೆಯಿಂದ ಹೊರಟು ಹೋಗಿದ್ದಳು. ಇದರಿಂದ ಬೇಸತ್ತ ತಂದೆ ಪ್ರಮೋದ್ ಕುಮಾರ್ ತನ್ನ ಮರ್ಯಾದೆ ಹೋಗುತ್ತೆ ಎಂದು ಹೇಳಿ ಮಗಳನ್ನೇ ಕುತ್ತಿಗೆ ಹಿಸುಕಿ ಕೊಂದಿದ್ದಾನೆ. ಅಲ್ಲದೆ, ಶವವನ್ನು ಹಸುವಿನ ಸೆಗಣಿಯ ಗೊಬ್ಬರದ ಮಧ್ಯೆ ಹೂತು ಬೆಂಕಿ ಹಚ್ಚಿದ್ದಾನೆ.
ಸೆಪ್ಟೆಂಬರ್ 9 ರಂದು ರಾತ್ರಿ ಪಕ್ಕದ ಹೊಲದಲ್ಲಿ ಏನೋ ಕೆಲಸ ಇದೆಯೆಂದು ಹೇಳಿ ಮಗಳನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ. ಮನೆಗೆ ಮರಳಿದ ನಂತರ, ಮಗಳನ್ನು ಪಾಣಿಪತ್ನಲ್ಲಿ ತನ್ನ ಸಹೋದರನಲ್ಲಿ ಬಿಟ್ಟು ಬಂದಿರುವುದಾಗಿ ಪ್ರಮೋದ್ ಮನೆಯಲ್ಲಿ ತಿಳಿಸಿದ್ದ. ಆದರೆ, ಶುಕ್ರವಾರ ರಾತ್ರಿ ಹೊಲದಲ್ಲಿ ಶವ ಸುಟ್ಟು ಹಾಕಿರುವ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಸ್ಥಳದಲ್ಲಿದ್ದ ಮೂಳೆಗಳನ್ನು ಸಂಗ್ರಹಿಸಿದ್ದು ಪ್ರಮೋದ್ ಕುಮಾರ್ ಬಗ್ಗೆ ಸಂಶಯ ಉಂಟಾಗಿ ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
In a case of honour killing, a 57-year-old man has been arrested for allegedly strangling his 19-year-old daughter to death over an inter-caste relationship.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm