ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm