ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm