ಬ್ರೇಕಿಂಗ್ ನ್ಯೂಸ್
15-09-22 12:08 pm HK Desk ಕ್ರೈಂ
ಲಕ್ನೋ, ಸೆ.15: ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಶವಗಳನ್ನು ಮರಕ್ಕೆ ನೇತು ಹಾಕಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆ ಮತ್ತೆ ದೇಶದ ಗಮನ ಸೆಳೆದಿದೆ.
ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಮತ್ತು ಸಂತ್ರಸ್ತರ ಸಂಬಂಧಿಕರು ಶವ ಮುಂದಿಟ್ಟು ರಸ್ತೆ ತಡೆದು ತನಿಖೆಗೆ ಒತ್ತಾಯಿಸಿದ್ದಾರೆ. 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಗಳಿಗೆ ಬಾಲಕಿಯರನ್ನು ಪರಿಚಯಿಸಿದ ಆರನೇ ವ್ಯಕ್ತಿ ಚೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್, ಜುನೈದ್ ಮತ್ತು ಹಫೀಜುಲ್ ರೆಹಮಾನ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯರು ತಮ್ಮನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೊಪ್ಪದೆ, ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಬಂಧಿತರು ಬಾಲಕಿಯರಿಗೆ ಪರಿಚಿತರೇ ಆಗಿದ್ದಾರೆ. ಆರೋಪಿಗಳ ಬೈಕ್ನಲ್ಲಿಯೇ ಬಾಲಕಿಯರು ತೆರಳಿದ್ದಾರೆ. ಆರೋಪಿಗಳಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿಗಳು ಕತ್ತುಹಿಸುಕಿ ಕೊಲೆಗೈದಿದ್ದಾರೆ.

ಅವರು ಧರಿಸಿದ್ದ ದುಪಟ್ಟಾದಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿದೆ. ನಂತರ ಕರೀಮುದ್ದೀನ್ ಮತ್ತು ಆರೀಫ್ ಶವಗಳನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. ಬಳಿಕ ಆತ್ಮಹತ್ಯೆ ಎಂದು ತೋರಿಸಲು ಶವಗಳನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In yet another nerve-racking incident from Uttar Pradesh’s Lakhimpur Kheri, two Dalit teenage sisters were found hanging from a tree in a sugarcane field in Lalpur Majra Tamoli Purva village under the Nighasan police station on Wednesday evening, police said. So far, four accused in the matter have been arrested and investigation is underway, added police.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm