ಬ್ರೇಕಿಂಗ್ ನ್ಯೂಸ್
15-09-22 12:55 pm Mangalore Correspondent ಕ್ರೈಂ
ಮಂಗಳೂರು, ಸೆ.15: ಕಾರು ಕಳವು ಪ್ರಕರಣ ನಡೆದು 25 ವರ್ಷಗಳ ಬಳಿಕ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಆರೇನಹಳ್ಳಿ ನಿವಾಸಿಯಾಗಿದ್ದ ಅಸ್ಲಂ ಪಾಷಾ ಬಂಧಿತನಾಗಿದ್ದು ಈತ 1997ರಲ್ಲಿ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ.
ಅಸ್ಲಾಂ ಪಾಷಾ, 1997ರ ನವೆಂಬರ್ 11ರಂದು ಅಂಬಾಸಿಡರ್ ಕಾರು ಕಳವು ಮಾಡಿದ್ದಾನೆ. ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆದರೆ ಜಾಮೀನು ಪಡೆದ ಬಳಿಕ 2000 ಫೆಬ್ರವರಿ 8 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಇದನ್ನು 2015 ರಲ್ಲಿ ಪತ್ತೆಯಾಗದ ಪ್ರಕರಣವೆಂದು ಪೊಲೀಸರು ಘೋಷಿಸಿದ್ದರು.
ಇತ್ತೀಚೆಗೆ, ಆತನ ವಿರುದ್ಧ ಕೋರ್ಟಿನಿಂದ ಎಲ್ ಪಿಸಿ ವಾರೆಂಟ್ ಪಡೆದು ಸೆಪ್ಟೆಂಬರ್ 12ರಂದು ಈತನನ್ನು ಪಿರಿಯಾಪಟ್ಟಣದ ಆರೇನಹಳ್ಳಿಯಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಜೈಲಿಗೆ ಹಾಕಲಾಗಿದೆ. ಆರೋಪಿ ಅಸ್ಲಂ ಪಾಷಾ ವಿರುದ್ಧ ಪಿರಿಯಾಪಟ್ಟಣದ ಬೆಟ್ಟದಪುರ, ಉದಯಪುರ, ಭದ್ರಾವತಿ, ಮಂಡ್ಯ, ಮೈಸೂರು ನಗರ, ಬೆಂಗಳೂರು ನಗರ ಹೀಗೆ ಹಲವಾರು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ. ಆರೋಪಿಯು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನು ಕಳವುಗೈದು ಅದರ ಚೇಸ್ ನಂಬರನ್ನು ಜಜ್ಜಿ ಕಾರಿನ ಬಣ್ಣ ಹಾಗೂ ನಂಬರ್ ಪ್ಲೇಟನ್ನು ಬದಲಾಯಿಸಿ ಕಡಿಮೆ ಬೆಲೆಗೆ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The city police have arrested a man accused of car theft 25 years after the crime took place. The accused is Aslam alias Aslam Pasha who was wanted in an Ambassador car theft case registered on 11 November 1997. The police have registered a case under IPC section 379.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm