ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm