ಬ್ರೇಕಿಂಗ್ ನ್ಯೂಸ್
            
                        08-10-20 07:02 pm Bangalore Correspondent ಕ್ರೈಂ
            ಬೆಂಗಳೂರು, ಅಕ್ಟೋಬರ್ 8: ಐಸಿಸ್ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಅಹ್ಮದ್ ಅಬ್ದುಲ್ ಸಿದರ್ (40) ಮತ್ತು ಇರ್ಫಾನ್ ನಾಸಿರ್(33) ಬಂಧಿತರು. ಅಬ್ದುಲ್ ನಾಸಿರ್ ನನ್ನು ತಮಿಳುನಾಡಿನ ರಾಮನಾಥಪುರಂನಲ್ಲಿ ಬಂಧಿಸಿದ್ದರೆ, ಮತ್ತೊಬ್ಬ ಆರೋಪಿ ಇರ್ಫಾನ್ ನಾಸಿರ್ನನ್ನು ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಬಂಧಿಸಲಾಗಿದೆ.
ಅಹ್ಮದ್ ಅಬ್ದುಲ್ ಸಿದರ್, ಚೆನ್ನೈನ ಬ್ಯಾಂಕ್ ಒಂದರಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ಆಗಿದ್ದ. ಇರ್ಫಾನ್ ನಾಸಿರ್, ಬೆಂಗಳೂರಿನಲ್ಲಿ ಅಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಉಗ್ರರು ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎಗೆ ಐಸಿಸ್ ಸಂಪರ್ಕದ ಸುಳಿವು ಲಭಿಸಿತ್ತು. ಇತ್ತೀಚೆಗೆ ಬೆಂಗಳೂರು ಮೂಲದ ಡಾ.ಅಬ್ದುರ್ ರೆಹಮಾನ್ ಎಂಬಾತನನ್ನು ಬಂಧಿಸಿದ್ದ ವೇಳೆ, ಆತ ಆರೋಪಿಗಳ ಸುಳಿವು ನೀಡಿದ್ದ. 2014ರಲ್ಲಿ ಡಾ.ಅಬ್ದುರ್ ರೆಹಮಾನ್ ಜೊತೆಗೆ ಇವರೂ ಪ್ರಯಾಣಿಸಿದ್ದರು ಎಂದು ಮಾಹಿತಿ ಸಿಕ್ಕಿತ್ತು.
ಈ ಕುರಿತಂತೆ ಇನ್ನಷ್ಟು ತನಿಖೆ ನಡೆಸಿದ ವೇಳೆ, ಬೆಂಗಳೂರಿನಲ್ಲಿ ಖುರಾನ್ ಸರ್ಕಲ್ ಎಂದು ಗ್ರೂಪ್ ಮಾಡಿಕೊಂಡು ಯುವಕರನ್ನು ಸಿರಿಯಾದ ಐಸಿಸ್ ನೆಟ್ವರ್ಕ್ ಸೇರುವಂತೆ ಪ್ರೇರೇಪಣೆ ನೀಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ, ಇವರಿಬ್ಬರು ಹಿಜ್ಬ್-ಉತ್-ತಾಹಿರ್ ಎಂಬ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಯಲ್ಲೇ, ತಮ್ಮ ತಂಡದ ಸದಸ್ಯರು ಹಾಗೂ ಗುಂಪುಗಳ ಮೂಲಕ ಹಣ ಸಂಗ್ರಹ ಕಾರ್ಯದಲ್ಲಿ ಸಕ್ರಿಯರಾಗಿದ್ದರು.
ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಮನೆಗಳಲ್ಲಿ ಎನ್ಐಎ ಶೋಧ ಕಾರ್ಯ ನಡೆಸಿದೆ. ಗುರುಪ್ಪನ ಪಾಳ್ಯ ಹಾಗೂ ಫ್ರೇಜರ್ ಟೌನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ವೇಳೆ ಧಾರ್ಮಿಕ ಭಾವನೆ ಪ್ರಚೋದಿಸುವ ಲೇಖನಗಳು, ವಿದ್ಯುನ್ಮಾನ ಉಪಕರಣಗಳು ಲಭ್ಯವಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
            
            
            NIA arrests two suspected IS terrorists, Ahamed Abdul Cader, 40, and Irfan Nasir, 33, from Bengaluru
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm