ಬ್ರೇಕಿಂಗ್ ನ್ಯೂಸ್
08-10-20 07:02 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 8: ಐಸಿಸ್ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಅಹ್ಮದ್ ಅಬ್ದುಲ್ ಸಿದರ್ (40) ಮತ್ತು ಇರ್ಫಾನ್ ನಾಸಿರ್(33) ಬಂಧಿತರು. ಅಬ್ದುಲ್ ನಾಸಿರ್ ನನ್ನು ತಮಿಳುನಾಡಿನ ರಾಮನಾಥಪುರಂನಲ್ಲಿ ಬಂಧಿಸಿದ್ದರೆ, ಮತ್ತೊಬ್ಬ ಆರೋಪಿ ಇರ್ಫಾನ್ ನಾಸಿರ್ನನ್ನು ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಬಂಧಿಸಲಾಗಿದೆ.
ಅಹ್ಮದ್ ಅಬ್ದುಲ್ ಸಿದರ್, ಚೆನ್ನೈನ ಬ್ಯಾಂಕ್ ಒಂದರಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ಆಗಿದ್ದ. ಇರ್ಫಾನ್ ನಾಸಿರ್, ಬೆಂಗಳೂರಿನಲ್ಲಿ ಅಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಉಗ್ರರು ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎಗೆ ಐಸಿಸ್ ಸಂಪರ್ಕದ ಸುಳಿವು ಲಭಿಸಿತ್ತು. ಇತ್ತೀಚೆಗೆ ಬೆಂಗಳೂರು ಮೂಲದ ಡಾ.ಅಬ್ದುರ್ ರೆಹಮಾನ್ ಎಂಬಾತನನ್ನು ಬಂಧಿಸಿದ್ದ ವೇಳೆ, ಆತ ಆರೋಪಿಗಳ ಸುಳಿವು ನೀಡಿದ್ದ. 2014ರಲ್ಲಿ ಡಾ.ಅಬ್ದುರ್ ರೆಹಮಾನ್ ಜೊತೆಗೆ ಇವರೂ ಪ್ರಯಾಣಿಸಿದ್ದರು ಎಂದು ಮಾಹಿತಿ ಸಿಕ್ಕಿತ್ತು.
ಈ ಕುರಿತಂತೆ ಇನ್ನಷ್ಟು ತನಿಖೆ ನಡೆಸಿದ ವೇಳೆ, ಬೆಂಗಳೂರಿನಲ್ಲಿ ಖುರಾನ್ ಸರ್ಕಲ್ ಎಂದು ಗ್ರೂಪ್ ಮಾಡಿಕೊಂಡು ಯುವಕರನ್ನು ಸಿರಿಯಾದ ಐಸಿಸ್ ನೆಟ್ವರ್ಕ್ ಸೇರುವಂತೆ ಪ್ರೇರೇಪಣೆ ನೀಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ, ಇವರಿಬ್ಬರು ಹಿಜ್ಬ್-ಉತ್-ತಾಹಿರ್ ಎಂಬ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಯಲ್ಲೇ, ತಮ್ಮ ತಂಡದ ಸದಸ್ಯರು ಹಾಗೂ ಗುಂಪುಗಳ ಮೂಲಕ ಹಣ ಸಂಗ್ರಹ ಕಾರ್ಯದಲ್ಲಿ ಸಕ್ರಿಯರಾಗಿದ್ದರು.
ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಮನೆಗಳಲ್ಲಿ ಎನ್ಐಎ ಶೋಧ ಕಾರ್ಯ ನಡೆಸಿದೆ. ಗುರುಪ್ಪನ ಪಾಳ್ಯ ಹಾಗೂ ಫ್ರೇಜರ್ ಟೌನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ವೇಳೆ ಧಾರ್ಮಿಕ ಭಾವನೆ ಪ್ರಚೋದಿಸುವ ಲೇಖನಗಳು, ವಿದ್ಯುನ್ಮಾನ ಉಪಕರಣಗಳು ಲಭ್ಯವಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
NIA arrests two suspected IS terrorists, Ahamed Abdul Cader, 40, and Irfan Nasir, 33, from Bengaluru
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm