ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm