ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm