ಬ್ರೇಕಿಂಗ್ ನ್ಯೂಸ್
24-09-22 12:56 pm HK News Desk ಕ್ರೈಂ
ಕಲಬುರಗಿ, ಸೆ.24: ಮಹಾರಾಷ್ಟ್ರ ಗಡಿಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಗಾಂಜಾ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.
ಕರ್ನಾಟಕ - ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಭೋಸಗಾ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿಗಳು ಗಾಂಜಾ ಬೆಳೆದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರ ತಂಡ ಶುಕ್ರವಾರ ರಾತ್ರಿ ದಾಳಿ ನಡೆಸಿತ್ತು. ಈ ವೇಳೆ, 40ಕ್ಕೂ ಹೆಚ್ಚು ಮಂದಿಯಿದ್ದ ದಂಧೆಕೋರರು ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಸಿಪಿಐ ಇಲ್ಲಾಳ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಮುಖ, ಹೊಟ್ಟೆಯ ಭಾಗಕ್ಕೆ ಹಲ್ಲೆ ನಡೆಸಿದ್ದು ಇಲ್ಲಾಳ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಸಿಪಿಐ ಇಲ್ಲಾಳ ನೇತೃತ್ವದ ಪೊಲೀಸರು ಎರಡು ದಿನಗಳ ಹಿಂದೆ ಪ್ರಮುಖ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಿದ್ದರು. 10 ಜನರ ಪೊಲೀಸ್ ತಂಡ ಶುಕ್ರವಾರ ಮಹಾರಾಷ್ಟ್ರ ಗಡಿಭಾಗಕ್ಕೆ ಹೋಗಿದ್ದು ಅಲ್ಲಿ ಗಾಂಜಾ ಬೆಳೆಯುತ್ತಿದ್ದ ಹೊಲಗಳಿಗೆ ದಾಳಿ ನಡೆಸಿತ್ತು. ರಾತ್ರಿ 9:30ರ ವೇಳೆಗೆ 40 ಮಂದಿಯಿದ್ದ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನು ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಸಮೀಪದ ಆಸ್ಪತ್ರೆಗೆ ಒಯ್ಯಲಾಗಿತ್ತು.
Drug peddlers attack Police during raid in Kalaburgi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm