ಬ್ರೇಕಿಂಗ್ ನ್ಯೂಸ್
09-10-20 12:56 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 09 : ಆನ್ ಲೈನ್ ವಂಚನೆ ಬಗ್ಗೆ ಎಷ್ಟೇ ಪ್ರಕರಣಗಳು ವರದಿಯಾದರೂ, ಜನ ಎಚ್ಚತ್ತುಕೊಳ್ಳಲ್ಲ. ಇಲ್ಲೊಬ್ಬರು ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ 12 ಲಕ್ಷದ ಆಸೆಗೆ ಬಿದ್ದು ಬರೋಬ್ಬರಿ 26,47,650 ರೂಪಾಯಿ ಕಳಕೊಂಡಿದ್ದಾರೆ.
ಉಡುಪಿಯ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪನಿ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ನೀವು ರೂಪಾಯಿ 12 ಲಕ್ಷ ಬಹುಮಾನ ಗೆದ್ದಿದ್ದೀರಿ, ಅದನ್ನು ಪಡೆಯಲು ನಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ನಾಗರಾಜ್ ಕರೆ ಮಾಡಿದ್ದು ಬಹುಮಾನದ ಹಣ ಪಡೆಯಲು ನೋಂದಣಿ ಶುಲ್ಕ 12,೦೦೦ ರೂ. ತೆರಬೇಕು ಎಂದು ತಿಳಿಸಿದ್ದರು.
ಅದರಂತೆ, 2019ರ ಎ.4ರಂದು ನಾಗರಾಜ್, 12 ಸಾವಿರ ರೂ. ಖಾತೆಗೆ ಪಾವತಿಸಿದ್ದರು. ಅನಂತರ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಎಂಬವರು, ಬೇರೆ ಸಂಖ್ಯೆಗಳಿಂದ ಕರೆ ಮಾಡಿ ತಾವು ನ್ಯಾಪ್ಟಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದರು. ಅಲ್ಲದೆ, 12 ಲಕ್ಷ ಬಹುಮಾನದ ಮೊತ್ತ ಪಡೆಯಲು ಜಿಎಸ್ ಟಿ, ಚಾರ್ಜ್ ಅಂತ ಶುಲ್ಕ ಕಟ್ಟಬೇಕು ಎಂದು ನಂಬಿಸಿದ್ದರು. ಹೀಗೆ ನಾಗರಾಜ್ ಭಟ್, 2019ರ ಎ.4ರಿಂದ ಜು.28ರ ನಡುವೆ ಜಿ.ಎಸ್.ಟಿ. ತೆರಿಗೆ, ವೆರಿಫಿಕೇಶನ್ ಚಾರ್ಜ್, ಸಬ್ಚಾರ್ಜ್ ಎಂದು ಒಟ್ಟು 26,47,650 ರೂ. ಮೊತ್ತವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ.

ಕೊನೆಗೆ, ನಾಗರಾಜ್ ಭಟ್ ತಾನು ಮೋಸ ಹೋಗಿದ್ದು ಅರಿವಾಗಿದ್ದು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Man looses 26 lakhs in online fraud later registers case in cyber crime. The victim has been identified as Nagraj Bhat from Udupi.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm