ಬ್ರೇಕಿಂಗ್ ನ್ಯೂಸ್
09-10-20 12:56 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 09 : ಆನ್ ಲೈನ್ ವಂಚನೆ ಬಗ್ಗೆ ಎಷ್ಟೇ ಪ್ರಕರಣಗಳು ವರದಿಯಾದರೂ, ಜನ ಎಚ್ಚತ್ತುಕೊಳ್ಳಲ್ಲ. ಇಲ್ಲೊಬ್ಬರು ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ 12 ಲಕ್ಷದ ಆಸೆಗೆ ಬಿದ್ದು ಬರೋಬ್ಬರಿ 26,47,650 ರೂಪಾಯಿ ಕಳಕೊಂಡಿದ್ದಾರೆ.
ಉಡುಪಿಯ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪನಿ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ನೀವು ರೂಪಾಯಿ 12 ಲಕ್ಷ ಬಹುಮಾನ ಗೆದ್ದಿದ್ದೀರಿ, ಅದನ್ನು ಪಡೆಯಲು ನಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ನಾಗರಾಜ್ ಕರೆ ಮಾಡಿದ್ದು ಬಹುಮಾನದ ಹಣ ಪಡೆಯಲು ನೋಂದಣಿ ಶುಲ್ಕ 12,೦೦೦ ರೂ. ತೆರಬೇಕು ಎಂದು ತಿಳಿಸಿದ್ದರು.
ಅದರಂತೆ, 2019ರ ಎ.4ರಂದು ನಾಗರಾಜ್, 12 ಸಾವಿರ ರೂ. ಖಾತೆಗೆ ಪಾವತಿಸಿದ್ದರು. ಅನಂತರ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಎಂಬವರು, ಬೇರೆ ಸಂಖ್ಯೆಗಳಿಂದ ಕರೆ ಮಾಡಿ ತಾವು ನ್ಯಾಪ್ಟಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದರು. ಅಲ್ಲದೆ, 12 ಲಕ್ಷ ಬಹುಮಾನದ ಮೊತ್ತ ಪಡೆಯಲು ಜಿಎಸ್ ಟಿ, ಚಾರ್ಜ್ ಅಂತ ಶುಲ್ಕ ಕಟ್ಟಬೇಕು ಎಂದು ನಂಬಿಸಿದ್ದರು. ಹೀಗೆ ನಾಗರಾಜ್ ಭಟ್, 2019ರ ಎ.4ರಿಂದ ಜು.28ರ ನಡುವೆ ಜಿ.ಎಸ್.ಟಿ. ತೆರಿಗೆ, ವೆರಿಫಿಕೇಶನ್ ಚಾರ್ಜ್, ಸಬ್ಚಾರ್ಜ್ ಎಂದು ಒಟ್ಟು 26,47,650 ರೂ. ಮೊತ್ತವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ.

ಕೊನೆಗೆ, ನಾಗರಾಜ್ ಭಟ್ ತಾನು ಮೋಸ ಹೋಗಿದ್ದು ಅರಿವಾಗಿದ್ದು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Man looses 26 lakhs in online fraud later registers case in cyber crime. The victim has been identified as Nagraj Bhat from Udupi.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm