ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm