ಬ್ರೇಕಿಂಗ್ ನ್ಯೂಸ್
06-10-22 08:01 pm Mangalore Correspondent ಕ್ರೈಂ
ಮಂಗಳೂರು, ಅ.6: ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬ ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಇದೆಯಾ ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ನಕಲಿ ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ನೆಪದಲ್ಲಿ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಳೆದ ಮಾರ್ಚ್ 3ರಂದು ಬೆಂಗಳೂರಿನಲ್ಲಿ ಕೆಲಸ ಮಾಡುವ ಐಟಿ ಸಾಫ್ಟ್ ವೇರ್ ತಂತ್ರಜ್ಞರೊಬ್ಬರು ಮಂಗಳೂರಿಗೆ ಬಂದಿದ್ದರು. ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ನೇರವಾದ ವಿಮಾನ ಸೌಲಭ್ಯ ಇದೆಯೇ ಎಂದು ಸರ್ಚ್ ನಡೆಸಿದ್ದಾರೆ. ಈ ವೇಳೆ, ವಿಮಾನ ಇಲ್ಲದೇ ಇರುವಾಗ ಖಾಸಗಿ ಹೆಲಿಕಾಪ್ಟರ್ ಇದೆಯೇ ಎಂದು ಸರ್ಚ್ ಮಾಡಿದ್ದರು.
ಗೂಗಲ್ ನಲ್ಲಿ ಸರ್ಚ್ ಮಾಡಿದ ವೇಳೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ವೆಬ್ ಸೈಟ್ ತೆರೆದುಕೊಂಡಿದ್ದು, ಸಂಪರ್ಕಿಸಿದಾಗ ನಿತಿನ್ ಎಂದು ತನ್ನನ್ನು ಪರಿಚಯಿಸಿದ್ದ ವ್ಯಕ್ತಿ ಫೋನ್ ಕರೆಗೆ ಸಿಕ್ಕಿದ್ದಾನೆ. ಆತ ಕಾಪ್ಟರ್ ಬುಕ್ಕಿಂಗ್ ಮಾಡಲು ಹಣ ನೀಡಬೇಕೆಂದು ಹೇಳಿದ್ದು, ಕ್ಯೂಆರ್ ಕೋಡ್ ಕಳಿಸಿದ್ದಾನೆ. ಬುಕ್ಕಿಂಗ್ ಅಡ್ವಾನ್ಸ್ ಎಂದು 38,060 ರೂಪಾಯಿ ಕಳಿಸಿಕೊಡಲು ಹೇಳಿದ್ದು, ಹಣವನ್ನು ಈ ವ್ಯಕ್ತಿ ಕಳಿಸಿದ್ದಾರೆ. ಆನಂತರ, ಫೋನ್ ಕರೆ ಮಾಡಿದಾಗ ನಿತಿನ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಆತ ತನ್ನನ್ನು ವೈಷ್ಣೋದೇವಿ ದೇವಸ್ಥಾನದ ಪ್ರತಿನಿಧಿಯೆಂದೂ ಹೇಳಿಕೊಂಡಿದ್ದ. ಮೋಸ ಹೋದ ಟೆಕ್ಕಿ ಆನಂತರ ವೈಷ್ಣೋದೇವಿ ದೇವಸ್ಥಾನದಲ್ಲಿ ಸಂಪರ್ಕಿಸಿದಾಗ, ತಮಗೆ ಯಾವುದೇ ಅಂತಹ ಪ್ರತಿನಿಧಿ ಇಲ್ಲವೆಂದು ಉತ್ತರ ನೀಡಿದ್ದಾರೆ. ಅದರಂತೆ, ಐಟಿ ಉದ್ಯೋಗಿ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು ಮಂಗಳೂರಿನಲ್ಲಿಯೇ ಬಂದು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
An IT consultant working in Bengaluru, who searched internet for booking a helicopter for Vaishno Devi Temple visit on Google, was cheated by an online fraud. The complainant had arrived in Mangaluru on March 3, and the next day he had searched for information regarding helicopter booking, for travel to the Vaishno Devi Temple on Google. From the search results, he got in touch with one Nithin, who introduced himself as a representative of the Vaishno Devi Temple Board.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm