ಬ್ರೇಕಿಂಗ್ ನ್ಯೂಸ್
11-10-22 12:42 pm Mangalore Correspondent ಕ್ರೈಂ
ಉಳ್ಳಾಲ, ಅ.11: ಗಣಿ ಇಲಾಖೆಯವರು ಜಪ್ತಿ ಪಡಿಸಿದ್ದ ಮರಳನ್ನು ಮಧ್ಯರಾತ್ರಿ ದಂಧೆಕೋರರೇ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು ಇದನ್ನ ಪ್ರಶ್ನಿಸಲು ಹೋದ ವ್ಯಕ್ತಿಯನ್ನು ಟಿಪ್ಪರ್ ಡಿಕ್ಕಿಯಾಗಿಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮರಳು ದಂಧೆಕೋರರ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಉಚ್ಚಿಲ ನಿವಾಸಿ ಕಿಶೋರ್(52) ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಉಚ್ಚಿಲದ ಬಟ್ಟಂಪಾಡಿ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ಇತ್ತೀಚೆಗೆ ಗಣಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆದರೆ ಜಪ್ತಿಗೊಳಿಸಿದ್ದ ಮರಳನ್ನೇ ರಾತ್ರಿ ವೇಳೆ ಸದ್ದಿಲ್ಲದೆ ಬೇರೆಡೆ ಸಾಗಿಸಲಾಗುತ್ತಿದ್ದು ಪ್ರಶ್ನಿಸಲು ಹೋದವರಿಗೆ ಇಲಾಖೆಯ ಆದೇಶವಿದೆ ಎಂದು ದಂಧೆಕೋರರು ಬೆದರಿಸಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಉಚ್ಚಿಲದ ರೈಲ್ವೇ ಗೇಟ್ ಬಳಿ ನಿನ್ನೆ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನ ಕಿಶೋರ್ ಅವರು ತನ್ನ ಸ್ಕೂಟರಲ್ಲಿ ಬೆನ್ನಟ್ಟಿದ್ದು, ಇದನ್ನ ಗಮನಿಸಿದ ಟಿಪ್ಪರ್ ಚಾಲಕ ಹಠತ್ತಾಗಿ ಬ್ರೇಕ್ ಹೊಡೆದು ಅಪಘಾತ ನಡೆಸಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಟಿಪ್ಪರನ್ನ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪಿಎಸ್ಸೈ ಪ್ರದೀಪ್ ಟಿ.ಆರ್ ಮರಳು ದಂಧೆಕೋರರ ಪರ ಬ್ಯಾಟಿಂಗ್ ನಡೆಸಿದ್ದು, ಉದ್ರಿಕ್ತ ಸ್ಥಳೀಯರು ಪಿಎಸ್ಸೈಯನ್ನ ತರಾಟೆಗೆ ತೆಗೆದಿದ್ದಾರೆ. ಜನರ ಆಕ್ರೋಶಕ್ಕೆ ಬಗ್ಗಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಪೋಲೀಸರು, ಅಧಿಕಾರಿಗಳು ಅಕ್ರಮ ಮರಳು ಸಾಗಾಟದ ಪರ ವಹಿಸಿದ್ದು, ರಾತ್ರಿಯಿಂದ ಬೆಳಗ್ಗಿನ ವರೆಗೂ ಅಕ್ರಮ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mangalore Illegal sand mining in Ullal, seized sand robbed, truck rams two wheeler that hinders, people protest.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm