ಬ್ರೇಕಿಂಗ್ ನ್ಯೂಸ್
11-10-22 12:42 pm Mangalore Correspondent ಕ್ರೈಂ
ಉಳ್ಳಾಲ, ಅ.11: ಗಣಿ ಇಲಾಖೆಯವರು ಜಪ್ತಿ ಪಡಿಸಿದ್ದ ಮರಳನ್ನು ಮಧ್ಯರಾತ್ರಿ ದಂಧೆಕೋರರೇ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು ಇದನ್ನ ಪ್ರಶ್ನಿಸಲು ಹೋದ ವ್ಯಕ್ತಿಯನ್ನು ಟಿಪ್ಪರ್ ಡಿಕ್ಕಿಯಾಗಿಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮರಳು ದಂಧೆಕೋರರ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಉಚ್ಚಿಲ ನಿವಾಸಿ ಕಿಶೋರ್(52) ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಉಚ್ಚಿಲದ ಬಟ್ಟಂಪಾಡಿ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ಇತ್ತೀಚೆಗೆ ಗಣಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆದರೆ ಜಪ್ತಿಗೊಳಿಸಿದ್ದ ಮರಳನ್ನೇ ರಾತ್ರಿ ವೇಳೆ ಸದ್ದಿಲ್ಲದೆ ಬೇರೆಡೆ ಸಾಗಿಸಲಾಗುತ್ತಿದ್ದು ಪ್ರಶ್ನಿಸಲು ಹೋದವರಿಗೆ ಇಲಾಖೆಯ ಆದೇಶವಿದೆ ಎಂದು ದಂಧೆಕೋರರು ಬೆದರಿಸಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಉಚ್ಚಿಲದ ರೈಲ್ವೇ ಗೇಟ್ ಬಳಿ ನಿನ್ನೆ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನ ಕಿಶೋರ್ ಅವರು ತನ್ನ ಸ್ಕೂಟರಲ್ಲಿ ಬೆನ್ನಟ್ಟಿದ್ದು, ಇದನ್ನ ಗಮನಿಸಿದ ಟಿಪ್ಪರ್ ಚಾಲಕ ಹಠತ್ತಾಗಿ ಬ್ರೇಕ್ ಹೊಡೆದು ಅಪಘಾತ ನಡೆಸಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಟಿಪ್ಪರನ್ನ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪಿಎಸ್ಸೈ ಪ್ರದೀಪ್ ಟಿ.ಆರ್ ಮರಳು ದಂಧೆಕೋರರ ಪರ ಬ್ಯಾಟಿಂಗ್ ನಡೆಸಿದ್ದು, ಉದ್ರಿಕ್ತ ಸ್ಥಳೀಯರು ಪಿಎಸ್ಸೈಯನ್ನ ತರಾಟೆಗೆ ತೆಗೆದಿದ್ದಾರೆ. ಜನರ ಆಕ್ರೋಶಕ್ಕೆ ಬಗ್ಗಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಪೋಲೀಸರು, ಅಧಿಕಾರಿಗಳು ಅಕ್ರಮ ಮರಳು ಸಾಗಾಟದ ಪರ ವಹಿಸಿದ್ದು, ರಾತ್ರಿಯಿಂದ ಬೆಳಗ್ಗಿನ ವರೆಗೂ ಅಕ್ರಮ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mangalore Illegal sand mining in Ullal, seized sand robbed, truck rams two wheeler that hinders, people protest.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm