ಬ್ರೇಕಿಂಗ್ ನ್ಯೂಸ್
14-10-22 07:38 pm Bangalore Correspondent ಕ್ರೈಂ
ಬೆಂಗಳೂರು, ಅ.14 : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ಮೊದಲ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗಿದೆ. ಮದುವೆಯ ಭರವಸೆ ನೀಡಿ ಉತ್ತರ ಪ್ರದೇಶ ಮೂಲದ ಹಿಂದು ಯುವತಿಯನ್ನು ಮುಸ್ಲಿಂ ಆಗಿ ಮತಾಂತರಿಸಿದ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದ ಗೋರಖ್ ಪುರ ಮೂಲದ 18 ವರ್ಷದ ಯುವತಿಯನ್ನು ಮತಾಂತರ ಮಾಡಿರುವ ಆರೋಪದಲ್ಲಿ ಸೈಯದ್ ಮುಯೀನ್ ಎಂಬ ಯುವಕನ ವಿರುದ್ಧ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವತಿಯ ಕುಟುಂಬ 15 ವರ್ಷಗಳಿಂದ ಯಶವಂತಪುರ ವ್ಯಾಪ್ತಿಯ ಬಿಕೆ ನಗರದಲ್ಲಿ ವಾಸವಿದ್ದು ತಂದೆ ಪೇಟಿಂಗ್ ಕೆಲಸ ಮಾಡಿಕೊಂಡಿದ್ರೆ ತಾಯಿ ಗೃಹಿಣಿ. ಇಬ್ಬರು ಸಹೋದರಿಯರು, ಓರ್ವ ಸಹೋದರನೊಂದಿಗೆ ವಾಸವಿದ್ದಳು. ಮಗಳು ಅನ್ಯ ಧರ್ಮೀಯ ಯುವಕನನ್ನ ಪ್ರೀತಿಸುತ್ತಿದ್ದಾಳೆ ಎಂದು ತಿಳಿದ ಪೋಷಕರು ಆರು ತಿಂಗಳ ಹಿಂದೆ ಆಕೆಗೆ ಬುದ್ಧಿಯನ್ನೂ ಹೇಳಿದ್ದರು.

ಆದರೆ ಅಕ್ಟೋಬರ್ 5ರಂದು ಯುವತಿ ಕಾಣೆಯಾಗಿದ್ದು ಅಂಗಡಿಗೆ ಹೋಗಿ ಬರುವುದಾಗಿ ಹೋದವಳು ವಾಪಸ್ ಬಂದಿರಲಿಲ್ಲ. ಯಶವಂತಪುರ ಠಾಣೆಯಲ್ಲಿ ಹೆತ್ತವರು ನಾಪತ್ತೆ ದೂರು ದಾಖಲಿಸಿದ್ದರು. ವಾರದ ಬಳಿಕ ಯುವತಿ ಬುರ್ಖಾ ಧರಿಸಿ ಯುವಕನ ಜೊತೆಗೆ ಠಾಣೆಗೆ ಬಂದಿದ್ದಳು. ಯುವತಿ ಮತಾಂತರಗೊಂಡಿದ್ದು ಆಕೆಯನ್ನ ಮದುವೆಯಾಗುವುದಾಗಿ ಮುಯೀನ್ ಠಾಣೆಗೆ ಕರೆತಂದಿದ್ದ.

ಮಗಳ ನಡೆ ಕಂಡು ಗಾಬರಿಗೊಂಡ ಪೋಷಕರು ಮುಯೀನ್ ವಿರುದ್ಧ ಮದುವೆಯ ಭರವಸೆ ನೀಡಿ ಮತಾಂತರಗೊಳಿಸಿದ್ದಾಗಿ ದೂರು ನೀಡಿದ್ದಾರೆ. ಯುವತಿಯ ಮನೆಯ ಪಕ್ಕದ ಏರಿಯಾದಲ್ಲಿ ವಾಸ ಮಾಡುತ್ತಿದ್ದ ಮುಯೀನ್, ಆಕೆಯನ್ನು ಪ್ರೀತಿಸಿದ್ದು ಮಾದುವೆಯಾಗಬೇಕಿದ್ರೆ ಮತಾಂತರ ಆಗಬೇಕೆಂದು ಒತ್ತಡ ಹೇರಿದ್ದ. ಮುಯೀನ್ ಮಾತು ನಂಬಿ ಆತನ ಜೊತೆ ಹೋಗಿದ್ದ ಯುವತಿ ಬುರ್ಖಾ ಧರಿಸಿ ಬಂದಿದ್ದಳು. ಮುಯೀನ್ ಸಲಹೆಯಂತೆ ಮಸೀದಿಯೊಂದರಲ್ಲಿ ಯುವತಿಯನ್ನು ಮತಾಂತರ ಮಾಡಲಾಗಿತ್ತು. ಸದ್ಯ ಯಶವಂತಪುರ ಠಾಣೆಯಲ್ಲಿ ಮತಾಂತರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಎಂದರೇನು..?
ಕರ್ನಾಟಕ ಮತಾಂತರ ನಿಷೇಧ ಕಾಯ್ದೆ ಪ್ರಕಾರ, ಯಾವುದೇ ವ್ಯಕ್ತಿ ಸ್ವಇಚ್ಛೆಯಿಂದ ಮತಾಂತರವಾಗಬಹುದು. ಆದರೆ ಮತಾಂತರ ಪ್ರಕ್ರಿಯೆ ಕಾನೂನು ಬದ್ಧವಾಗಿರಬೇಕು. ಮತಾಂತರವಾಗುವ ವ್ಯಕ್ತಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಬಳಿಕ ಡಿ.ಸಿ ಆ ವ್ಯಕ್ತಿಯ ಪೋಷಕರು / ಆಪ್ತರ ಹೇಳಿಕೆ ಪಡೆಯುತ್ತಾರೆ. ಇದಾದ ಬಳಿಕ 30 ದಿನಗಳ ಗಡವು ನೀಡುತ್ತಾರೆ. ಯಾವುದೇ ಒತ್ತಡವಿಲ್ಲದೆ ತಮ್ಮ ಇಷ್ಟದಂತೆ ಮತಾಂತರವಾಗುತಿದ್ದರೆ ಡಿಸಿ ಅನುಮತಿ ನೀಡುತ್ತಾರೆ. ಒತ್ತಡ ಅಥವಾ ಆಮಿಷಕ್ಕೆ ಬಲಿಯಾಗಿ ಮತಾಂತರವಾದರೆ ಕಾನೂನು ಕ್ರಮಕ್ಕೆ ಅವಕಾಶವಿದೆ. ಮತಾಂತರಕ್ಕೆ ಸಹಾಯ ಮಾಡುವ ಎಲ್ಲ ವ್ಯಕ್ತಿಗಳ ಮೇಲೂ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕಾಗುತ್ತದೆ. ಸದ್ಯ ಇದೇ ಕಾಯ್ದೆಯಡಿ ಮುಯೀನ್ ಹಾಗೂ ಆತನಿಗೆ ಸಹಾಯ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
First case under Anti conversion act in Bangalore, FIR registered against Muslim youth for coverting Hindu girl in pretext of marriage.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm