ಬ್ರೇಕಿಂಗ್ ನ್ಯೂಸ್
21-10-22 01:47 pm Mangalore Correspondent ಕ್ರೈಂ
ಮಂಗಳೂರು, ಅ.21: ಅಪ್ರಾಪ್ತ ವಯಸ್ಕ ಬಾಲಕಿಯ ಜೊತೆ ಸ್ನೇಹ ಸಂಪಾದಿಸಿ, ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ ಟೇಬಲ್ ಒಬ್ಬರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಬಜ್ಪೆ ನಿವಾಸಿ ಪ್ರವೀಣ್ ಸಾಲ್ಯಾನ್(35) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.
ಬಜ್ಪೆ ಸಿದ್ದಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು, ಆನಂತರ ತಾನು ಪ್ರೀತಿಸುವುದಾಗಿ ನಾಟಕ ಮಾಡಿದ್ದ. ಮೊಬೈಲ್ ಸಂಖ್ಯೆ ಪಡೆದು ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಈ ನಡುವೆ, ತನ್ನ ಗುಪ್ತಾಂಗದ ಚಿತ್ರಗಳನ್ನು ಕಳುಹಿಸಿ ಆಕೆಯ ಜೊತೆಗೆ ಅಶ್ಲೀಲ ಸಂಭಾಷಣೆಗಳನ್ನು ನಡೆಸುತ್ತಿದ್ದ.
ಬಳಿಕ ಆಕೆಯಲ್ಲಿ ಒಂದು ಲಕ್ಷ ರೂ. ಹಣ ನೀಡಬೇಕು ಎಂದು ಬ್ಲಾಕ್ಮೇಲ್ ಮಾಡಿದ್ದ. ಇದರಿಂದ ಆತಂಕಗೊಂಡಿದ್ದ ಯುವತಿ 2015ರ ಜೂನ್ 10ರಂದು ನಸುಕಿನಲ್ಲಿ ತನ್ನ ಮನೆಯ ಬೆಡ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಪ್ರವೀಣ್ ಸಾಲ್ಯಾನ್ ಕಾರಣವೆಂದು ಸ್ಪಷ್ಟವಾಗಿ ನಮೂದಿಸಿದ್ದಳು. ವಿಚಾರಣೆ ನಡೆಸಿದ್ದ ಪೊಲೀಸರು ಆಕೆಯ ಡೆತ್ ನೋಟ್, ಮೊಬೈಲಿನಲ್ಲಿದ್ದ ಆಕೆಯೊಂದಿಗೆ ಸಂಭಾಷಣೆ ನಡೆಸಿದ್ದ ಸಾಕ್ಷ್ಯಗಳನ್ನು ಆಧರಿಸಿ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಸೆಕ್ಷನ್ 305ರಡಿ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ, ಸೆಕ್ಷನ್ 12ರ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Praveen Salian (35), a police constable of District Armed Reserve (DAR) police, was sentenced to life imprisonment as the accusation of sexual harassment and abetting suicide of a minor girl on him was proved in the court.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
24-06-25 07:39 pm
Bangalore Correspondent
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm