ಬ್ರೇಕಿಂಗ್ ನ್ಯೂಸ್
27-10-22 02:52 pm Mangalore Correspondent ಕ್ರೈಂ
ಉಳ್ಳಾಲ, ಅ.27 : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ.
ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ ತಂದಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಇನ್ನೂರು ಗುತ್ತು ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ ಮಂಚದಲ್ಲಿ ಹೆಣವಾಗಿದ್ದರು. ಗಾಬರಿಗೊಂಡ ಶಕುಂತಳಾ ಅವರು ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.




ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ. ಇದರಿಂದ ಸೈಕೋ ರೀತಿ ವರ್ತಿಸುತ್ತಿದ್ದು ನೆರೆಹೊರೆಯವರಲ್ಲೂ ವಿನಾ ಕಾರಣ ತಗಾದೆ ಎತ್ತಿ ಗಲಾಟೆ ನಡೆಸುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಪತ್ನಿ ಶೋಭಾ ಅವರಿಗೆ ಯಾರಾದರೂ ಫೋನ್ ಕರೆ ಮಾಡಿದರೂ ಸೈಕೋ ಪತಿರಾಯ ಗಲಾಟೆ ನಡೆಸುತ್ತಿದ್ದನೆಂದು ನೆರೆಹೊರೆಯ ನಿವಾಸಿಗಳು ತಿಳಿಸಿದ್ದಾರೆ.




ಶೋಭಾ ಅವರ ಕಿರಿಯ ಮಗಳು ಕಾವ್ಯ ಎರಡು ವರ್ಷದ ಹಿಂದಷ್ಟೆ ಮದುವೆಯಾಗಿದ್ದಳು. ಹಿರಿಯ ಮಗ ಕಾರ್ತಿಕ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ. ಸೈಕೋ ತಂದೆ ಮಾಡಿದ ಹೀನ ಕೃತ್ಯಕ್ಕೆ ಮಕ್ಕಳೇ ಬಾಯಿಗೆ ಬಂದ ರೀತಿ ಬೈದು ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Husband kills wife suspecting affair at Pilar in Ullal, kills himself too. The deceased has been identified as Shoba Poojary (45) and husband Shivanand. Ullal police are now investigating the case.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm