ಬ್ರೇಕಿಂಗ್ ನ್ಯೂಸ್
27-10-22 04:18 pm Mangalore Correspondent ಕ್ರೈಂ
ಮಂಗಳೂರು, ಅ.27 : ಉತ್ತರ ಪ್ರದೇಶದ ಯೋಗಿ ಸರ್ಕಾರದ ಮಾದರಿಯಲ್ಲೇ ಗೋಹತ್ಯೆ ನಡೆಸುವ ಅಕ್ರಮ ದಂಧೆಕೋರರಿಗೆ ರಾಜ್ಯದಲ್ಲೂ ಆಸ್ತಿ ಮುಟ್ಟುಗೋಲಿನ ಶಾಕ್ ನೀಡಲಾಗಿದೆ.
ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಿದ್ದು, ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಮೂರು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡಗಳನ್ನು ಕಂದಾಯ ಇಲಾಖೆ ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಂಡಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8 (4) ಅಡಿಯಲ್ಲಿ ಮುಟ್ಟುಗೋಲು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡ, ಅಲ್ಲಿನ ಜಾಗಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಜಾಗ ವಶಕ್ಕೆ ಪಡೆದಿದ್ದಲ್ಲದೆ, ಸರ್ಕಾರದ ಹೆಸರಲ್ಲಿ ಆರ್.ಟಿ.ಸಿ ನೋಂದಣಿ ಮಾಡಲಾಗಿದೆ. ಕಾಟಿಪಳ್ಳ, ಅರ್ಕುಳ ಮತ್ತು ಗಂಜಿಮಠದಲ್ಲಿ ಈ ರೀತಿಯ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ನಡೆಸಲಾಗಿದೆ.
ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೂಚನೆಯಂತೆ ಸಹಾಯಕ ಆಯುಕ್ತ ಮದನ್ ಮೋಹನ್ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಠಾಣೆಗಳ ವರದಿ ಆಧರಿಸಿ ಜಾಗ ಮಾರಾಟ, ಬಾಡಿಗೆ ಹಾಗೂ ಅಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುಟ್ಟುಗೋಲು ಹಾಕಲಾಗಿದೆ. ಎರಡು ವರ್ಷಗಳ ಹಿಂದೆ ಕಾಯ್ದೆ ಜಾರಿ ಬೆನ್ನಲ್ಲೇ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಸಕ ಭರತ್ ಶೆಟ್ಟಿ ಸೂಚಿಸಿದ್ದರು.
ಶಾಸಕರ ಸೂಚನೆ ಬೆನ್ನಲ್ಲೇ ಫೀಲ್ಡಿಗಿಳಿದಿದ್ದ ಪೊಲೀಸರು, ಮಂಗಳೂರು ಉತ್ತರ ಕ್ಷೇತ್ರದ ವಿವಿಧ ಕಡೆ ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ನಡೆಸಿ ಜಾಗ ಮತ್ತು ವಸ್ತುಗಳನ್ನು ವಶಕ್ಕೆ ಪಡೆದು ಮಂಗಳೂರು ವಿಭಾಗದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಎಂಬವರಿಗೆ ಸೇರಿದ ಜಾಗ ಮುಟ್ಟುಗೋಲು ಹಾಕಲಾಗಿದ್ದು, ಬಜಪೆ, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಕ್ರಮ ಕಸಾಯಿಖಾನೆಗಳು ಇದ್ದವು.
Three slaughterhouses seized at MLA Bharath Shetty behest in Mangalore at Surathkal. The revenue department has seized three abattoirs in Mangaluru north constituency under the Karnataka Prevention of Slaughter and Preservation of Cattle Act 2020, Act 8 (4). The government has taken into possession slaughterhouses at Katipalla, Arkula and Ganjimath run illegally.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am