ಬ್ರೇಕಿಂಗ್ ನ್ಯೂಸ್
28-10-22 06:08 pm Bangalore Correspondent ಕ್ರೈಂ
ಬೆಂಗಳೂರು, ಅ.28 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು 98 ಲಕ್ಷ ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್ ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತರು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳ 12 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುಮಾರು ಐದಾರು ವರ್ಷಗಳಿಂದ ಮೂವರು ಆರೋಪಿಗಳು ಕಳ್ಳತನ ಪ್ರವೃತ್ತಿಯಲ್ಲಿ ತೊಡಗಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ವೇಳೆ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಹಮ್ಮದ್ ಸದ್ದಾಂ, ಸಯ್ಯದ್ ತರಬೇಜ್ ಪಾಷಾ ಮತ್ತು ಅಬೀದ್ ಅಜಂ ಈ ಮೂವರು ಆರೋಪಿಗಳು ಈ ಹಿಂದೆ ಸಿಟಿ ಮಾರ್ಕೆಟ್, ಡಿಜೆ ಹಳ್ಳಿ ಮತ್ತು ಹಾಸನ ಟೌನ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಪಾಟಿನ ನಕಲಿ ಕೀ ಮಾಡಿಟ್ಟುಕೊಂಡು ಮಾಲೀಕರಿಗೆ ತಿಳಿಯದೆ ಕಳೆದ ಐದಾರು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಿತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರಿಗೆ ಅನುಮಾನ ಬಂದಿದ್ದರಿಂದ ಆರೋಪಿ ಕೆಲಸ ಬಿಟ್ಟು ರಾಜಸ್ತಾನದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಿಂದ ಸುಮಾರು 98 ಲಕ್ಷ ರೂ. ಬೆಲೆ ಬಾಳುವ ಒಂದು ಕೆಜಿ 980 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
Four notorious robbers having 12 cases arrested in Bangalore by CCB.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am