ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.
ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am