ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm