ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm