ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm