ಬ್ರೇಕಿಂಗ್ ನ್ಯೂಸ್
06-11-22 02:28 pm HK News Desk ಕ್ರೈಂ
ಪಾಟ್ನಾ, ನ.6: ವಾಮಾಚಾರ ಮಾಡುತ್ತಿದ್ದಳೆಂದು ಆರೋಪಿಸಿ ಮಹಿಳೆಯೊಬ್ಬಳನ್ನು ಥಳಿಸಿದ್ದಲ್ಲದೆ, ಆಕೆಯನ್ನು ಮನೆಯಲ್ಲೇ ಕೂಡಿಹಾಕಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಆಘಾತಕಾರಿ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಅರ್ಜುನ್ ದಾಸ್ ಎಂಬವರ ಪತ್ನಿ ರೀಟಾ ದೇವಿ (45) ಎಂದು ಗುರುತಿಸಲಾಗಿದೆ. ನೆರೆಹೊರೆಯ ಮನೆಯವರೇ ಸೇರಿ ಮಹಿಳೆಗೆ ಹಲ್ಲೆಗೈದು ನಂತರ ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಹಿಳೆಯರನ್ನು ಬಂಧಿಸಲಾಗಿದೆ.
![]()
ತಿಂಗಳ ಹಿಂದಷ್ಟೇ ಭುಯಾನ್ ಸಮುದಾಯದ ಪರಮೇಶ್ವರ್ ಎಂಬ ವ್ಯಕ್ತಿ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಆದರೆ ಅವರ ಕುಟುಂಬದವರು ರೀಟಾ ದೇವಿ ಈತನಿಗೆ ವಾಮಾಚಾರ ಮಾಡಿ ಕೊಲೆ ಮಾಡಿದ್ದಾಳೆ ಎಂದು ದೂರಿದ್ದರು. ಇದರಿಂದ ಎರಡು ಕುಟುಂಬಗಳ ನಡುವೆ ವೈರತ್ವ ಉಂಟಾಗಿತ್ತು. ಪರಮೇಶ್ವರ್ ಸಂಬಂಧಿಕರು ಪ್ರತಿಯಾಗಿ ದೂರದ ಜಾರ್ಖಂಡ್ನಿಂದ ವಾಮಾಚಾರ ಮಾಡುವ ವ್ಯಕ್ತಿಯನ್ನು ಕರೆಸಿದ್ದರು. ಆತ, ರೀಟಾಗೆ ಪರಮೇಶ್ವರ್ ಕೊಲೆಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
![]()
ಈ ನಡುವೆ, ಪರಮೇಶ್ವರ್ ಕುಟುಂಬಸ್ಥರು ರೀಟಾಳ ಮನೆಗೆ ಬಂದು ಥಳಿಸಿದ್ದಾರೆ. ಈ ವೇಳೆ, ರೀಟಾ ಪತಿ ಅರ್ಜುನ್ ದಾಸ್ ಮತ್ತು ಮಕ್ಕಳು ಓಡಿ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆಯನ್ನು ಮನೆಯಲ್ಲಿ ಕೂಡಿಹಾಕಿ ಥಳಿಸಿದ್ದು ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಈ ವೇಳೆ, ಮನೆಯ ಗ್ಯಾಸ್ ಓಪನ್ ಮಾಡಿ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಇದರಿಂದ ಮಹಿಳೆ ಸಜೀವ ದಹನವಾಗಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಅಲ್ಲಿನ ಜನರು ಹಲ್ಲೆಗೆ ಮುಂದಾಗಿದ್ದರು. ಬಳಿಕ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.
The incident happened in a remote hilly region of Pachmah village under Maigra police station limits bordering the forests of Jharkhand. Locals attacked and forced the local police team to return that had reached the spot to rescue the woman, identified as Rita Devi, 45, wife of Arjun Das.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm