ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am