ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm