ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm