ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm