ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm