ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm