ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm