ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm