ಬ್ರೇಕಿಂಗ್ ನ್ಯೂಸ್
18-11-22 07:29 pm Mangalore Correspondent ಕ್ರೈಂ
ಮಂಗಳೂರು, ನ.18: ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯಿಂದ ಕರ್ನಾಟಕದ ಕರಾವಳಿಗೆ ಭಾರೀ ಪ್ರಮಾಣದ ಗಾಂಜಾ ಪೂರೈಸಲು ತರುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಹೀಂದ್ರ ಎಕ್ಸ್ ಯುವಿ ಕಾರಿನಲ್ಲಿ ತರಲಾಗುತ್ತಿದ್ದ 132 ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಕೇರಳ ಗಡಿಭಾಗದ ತೌಡುಗೋಳಿ ಕ್ರಾಸ್ ನರಿಂಗಾನ ನಿವಾಸಿ ರಮೀಝ್ ರಾಝ್ (30) ಮತ್ತು ಮಂಜೇಶ್ವರ ಮೀಯಪದವು ಬಳಿಯ ಮದಂಗಲ್ಲು ಕಟ್ಟೆ ನಿವಾಸಿ ಅಬ್ದುಲ್ ಖಾದರ್ ಹ್ಯಾರಿಸ್(31) ಬಂಧಿತರು. ಇವರು ಕಾರಿನಲ್ಲಿ ಕೋಣಾಜೆ ಬಳಿಯ ಮುಡಿಪು ಕುರ್ನಾಡು ಬಳಿಯ ಕಾಯರ್ ಗೋಳಿ ಎಂಬಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಮಂಗಳೂರಿನ ಸಿಸಿಬಿ ಪೊಲೀಸರು ಅಡ್ಡಗಟ್ಟಿ ವಶಕ್ಕೆ ಪಡೆದಿದ್ದಾರೆ.




ಕಾರಿನ ಹಿಂಬದಿಯಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ 132 ಕೇಜಿ ಗಾಂಜಾವನ್ನು ಇಡಲಾಗಿತ್ತು. ಮಹೀಂದ್ರಾ ಕಾರು, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್, ಮೂರು ತಲವಾರುಗಳನ್ನು ವಶಕ್ಕೆ ಪಡೆಯಲಾಗಿದ್ದು ಒಟ್ಟು ಸೊತ್ತಿನ ಮೌಲ್ಯ 39.15 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಬೆಂಗಳೂರು ಮೂಲಕ ಮಂಗಳೂರಿಗೆ ತರುತ್ತಿದ್ದರು. ಕರಾವಳಿಯ ಮಂಗಳೂರು, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಕಡೆಗಳಿಗೆ ಪೂರೈಸಲು ಗಾಂಜಾ ತರುತ್ತಿದ್ದರು ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗಾಂಜಾ ಸಾಗಾಟದ ವೇಳೆ ಪೊಲೀಸರು ಅಥವಾ ಸಾರ್ವಜನಿಕರು ಅಡ್ಡಗಟ್ಟಿದಲ್ಲಿ ದಾಳಿ ನಡೆಸುವ ಉದ್ದೇಶದಿಂದ ತಲವಾರು ಇಟ್ಟುಕೊಂಡಿದ್ದರು.



ಆರೋಪಿ ರಮೀಜ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಾಗಾಟ, ಹಲ್ಲೆ ಸೇರಿದಂತೆ ಮೂರು ಪ್ರಕರಣ ದಾಖಲಾಗಿದೆ. ಉಳ್ಳಾಲದಲ್ಲಿ ಗಾಂಜಾ, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅಬ್ದುಲ್ ಹ್ಯಾರಿಸ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎರಡು ಕೊಲೆ ಯತ್ನ ಪ್ರಕರಣ ಹಾಗೂ ಮಂಜೇಶ್ವರ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳನ್ನು ಕಮಿಷನರ್ ಕಚೇರಿ ಮುಂದೆ ಮಾಧ್ಯಮಗಳ ಮುಂದೆ ಹಾಜರುಪಡಿಸಿ, ಭಾರೀ ಸಮಯದ ಬಳಿಕ ದೊಡ್ಡ ಪ್ರಮಾಣದ ಗಾಂಜಾ ಪ್ರಕರಣವನ್ನು ಭೇದಿಸಿದ್ದಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Central Crime Branch personnel claimed to have intercepted a major consignment of ganja worth about ₹39 lakh which was being brought from Visakhapatnam in Andhra Pradesh to Mangaluru for onward shipment to Kerala, Bengaluru and other places.Besides seizing 132 kg of cannabis, lethal weapons and the sports utility vehicle using to transport the contraband, police arrested two persons.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm