ಬ್ರೇಕಿಂಗ್ ನ್ಯೂಸ್
18-11-22 07:46 pm Mangalore Correspondent ಕ್ರೈಂ
ಮಂಗಳೂರು, ನ.18: ಹೂವಿನ ಅಂಗಡಿಯಲ್ಲಿ ಇಟ್ಟಿದ್ದ 9 ಲಕ್ಷ ರೂ. ನಗದು ಮತ್ತು ಸಿಸಿ ಕೆಮರಾದ ಡಿವಿಆರ್ ಕಳವುಗೈದ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪ್ಪಾಡ್ ಚೇಂಬರ್ ಕಟ್ಟಡದಲ್ಲಿ ನಡೆದಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳೆದ 12 ವರ್ಷಗಳಿಂದ ಹೋಲ್ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್ನ ಸೆಂಟರ್ ಲಾಕ್ ಮುರಿದಿತ್ತು. ಅಂಗಡಿಯ ಶಟರ್ ಮೇಲಕ್ಕೆತ್ತಿ ನೋಡಿದಾಗ ಟೇಬಲ್ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಬಾಕ್ಸ್ ಅನ್ನೂ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಉಮರಬ್ಬ ಅವರು ಪ್ರತಿನಿತ್ಯ ವ್ಯಾಪಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಹೂವು ಪೂರೈಸುವ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಡ್ರಾವರ್ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಬಾಗಿಲು ಮುಚ್ಚಿ ತೆರೆಳಿದ್ದರು.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರಲಿದ್ದರು. ಸುಮಾರು ಒಂದು ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ಉಮರಬ್ಬ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Whole sale flower shop robbed, 9 lakhs cash stolen.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm