ಬ್ರೇಕಿಂಗ್ ನ್ಯೂಸ್
18-11-22 07:46 pm Mangalore Correspondent ಕ್ರೈಂ
ಮಂಗಳೂರು, ನ.18: ಹೂವಿನ ಅಂಗಡಿಯಲ್ಲಿ ಇಟ್ಟಿದ್ದ 9 ಲಕ್ಷ ರೂ. ನಗದು ಮತ್ತು ಸಿಸಿ ಕೆಮರಾದ ಡಿವಿಆರ್ ಕಳವುಗೈದ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪ್ಪಾಡ್ ಚೇಂಬರ್ ಕಟ್ಟಡದಲ್ಲಿ ನಡೆದಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳೆದ 12 ವರ್ಷಗಳಿಂದ ಹೋಲ್ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್ನ ಸೆಂಟರ್ ಲಾಕ್ ಮುರಿದಿತ್ತು. ಅಂಗಡಿಯ ಶಟರ್ ಮೇಲಕ್ಕೆತ್ತಿ ನೋಡಿದಾಗ ಟೇಬಲ್ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಬಾಕ್ಸ್ ಅನ್ನೂ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಉಮರಬ್ಬ ಅವರು ಪ್ರತಿನಿತ್ಯ ವ್ಯಾಪಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಹೂವು ಪೂರೈಸುವ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಡ್ರಾವರ್ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಬಾಗಿಲು ಮುಚ್ಚಿ ತೆರೆಳಿದ್ದರು.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರಲಿದ್ದರು. ಸುಮಾರು ಒಂದು ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ಉಮರಬ್ಬ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Whole sale flower shop robbed, 9 lakhs cash stolen.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm