ಬ್ರೇಕಿಂಗ್ ನ್ಯೂಸ್
19-11-22 11:43 am Bangalore Correspondent ಕ್ರೈಂ
ಬೆಂಗಳೂರು, ನ.19: ನಗರದ ಖಾಸಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಕೆಲ ವಿದ್ಯಾರ್ಥಿಗಳು, ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಡಿಯೊ ವೈರಲ್ ಆಗಿದ್ದು, ಈ ಸಂಬಂಧ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಮಾರತ್ತಳ್ಳಿಯ ನ್ಯೂ ಹಾರಿಜನ್ ಕಾಲೇಜಿನಲ್ಲಿ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ. ಈ ವೇಳೆ ಇದಕ್ಕೆ ಕಾಲೇಜಿನ ಇತರ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿ, ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದ್ದರಿಂದ ರಿಯಾ, ಆರ್ಯನ್, ದಿನಕರ್ ಎಂಬ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್ಯನ್ ಎಂಬಾತನನ್ನು ಮೊದಲಿಗೆ ಇತರ ವಿದ್ಯಾರ್ಥಿಗಳು ಥಳಿಸಿ, ಭಾರತ್ ಮಾತಾ ಕಿ ಜೈ, ಕರ್ನಾಟಕ ಮಾತಾ ಕಿ ಜೈ, ಜೈ ಹಿಂದ್ ಹಾಗೂ ಜೈ ಕರ್ನಾಟಕ ಎಂದು ಘೋಷಣೆ ಕೂಗುವಂತೆ ಹೇಳಿ, ಇನ್ನು ಮುಂದೆ ಈ ರೀತಿ ತಪ್ಪು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿಚಾರಣೆ ವೇಳೆ ತಮಾಷೆಗಾಗಿ ಪಾಕ್ ಪರ ಜೈಕಾರ ಹಾಕಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು. ಸದ್ಯ ಮೂವರ ವಿರುದ್ಧ ಸದ್ಯ ಘಟನೆ ಸಂಬಂಧ ಎರಡು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ 153-ಜನಾಂಗೀಯ ದ್ವೇಷಕ್ಕೆ ಪ್ರಚೋದನೆ, 505(1)B- ಸಾರ್ವಜನಿಕರಲ್ಲಿ ಭಯವನ್ನು ಉಂಟು ಮಾಡುವುದು, ದೇಶದ ವಿರುದ್ಧ ಕೆಲಸ ಮಾಡಲು ವ್ಯಕ್ತಿಯನ್ನು ಪ್ರಚೋದಿಸುವ ಆರೋಪದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
The students at a private college in Marathahalli shouted pro-Pakistan slogans and then made a video out of it. As per the visuals, one of the students standing in the midst of the crowd during the college festival can be seen shouting 'Pakistan zindabad' followed by her classmate repeating the same and the other shooting the video on the mobile.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm