ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm