ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm