ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm