ಬ್ರೇಕಿಂಗ್ ನ್ಯೂಸ್
28-11-22 08:46 pm HK News Desk ಕ್ರೈಂ
ಉತ್ತರ ಪ್ರದೇಶ, ನ.28: ಪತಿಯ ಮೇಲಿನ ಕೋಪಕ್ಕೆ ತನ್ನ ಒಂದೂವರೆ ವರ್ಷದ ಹೆಣ್ಣು ಮಗುವನ್ನೇ ಹೆತ್ತ ತಾಯಿ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಔರಂಗಪುರ ಭಿಕ್ಕು ಗ್ರಾಮದಲ್ಲಿ ನಡೆದಿದೆ.
ಅಂಕಿತ್ ಸಿಂಗ್ ಮತ್ತು ಶಿವಾನಿ ರಾಣಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳು ಹುಟ್ಟಿದ ನಂತರ ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು. ಮೊನ್ನೆ ಕೂಡ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಪತಿಯೊಂದಿಗೆ ತೀವ್ರ ವಾಗ್ವಾದದ ನಂತರ ಅಂಕಿತ್ ಮೇಲಿನ ಕೋಪಕ್ಕೆ ಶಿವಾನಿ ಮಗುವನ್ನು ಸಾಯಿಸಿದ್ದಾಳೆ.
ಮಗುವಿನ ತಂದೆ ಅಂಕಿತ್ ಸಿಂಗ್ ಶನಿವಾರ ತಮ್ಮ ಮಗಳು ನಿಗೂಢವಾಗಿ ಸಾವನ್ನಪ್ಪಿದೆ ಎಂದು ದೂರು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಗೆಯಲ್ಲಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಬಳಿಕ ಮಗುವಿನ ತಾಯಿ ಶಿವಾನಿ ರಾಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆ ಮಗುವನ್ನು ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಬಿಜ್ನೋರ್ ಪೊಲೀಸ್ ಅಧೀಕ್ಷಕ ದಿನೇಶ್ ಸಿಂಗ್ ತಿಳಿಸಿದ್ದಾರೆ. ಆರೋಪಿ ತಾಯಿ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A one-and-a-half-year-old baby girl was strangled to death allegedly by her mother in a fit of rage only to spite her husband. The incident took place in the Aurangpur Bhikku village in Bijnor district. Bijnor superintendent of police, Dinesh Singh, said, “The child’s father, Ankit Singh, has filed a complaint that his daughter died under mysterious circumstances on Saturday. We sent the body for post-mortem, which revealed that the death was caused due to suffocation.”
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm