ಬ್ರೇಕಿಂಗ್ ನ್ಯೂಸ್
06-12-22 04:21 pm HK News Desk ಕ್ರೈಂ
ನವದೆಹಲಿ, ಡಿ.6: ಆಸ್ತಿ ವಿವಾದಕ್ಕೆ ಸಂಬಂಧಿಸಿ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಕುಂತಿ ಜಿಲ್ಲೆಯ ಮುರ್ಹು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಡಿಸೆಂಬರ್ 2 ರಂದು ಮೃತನ ತಂದೆ ದೂರು ದಾಖಲಿಸಿದ ನಂತರ ಪ್ರಮುಖ ಆರೋಪಿ, ಆತನ ಹೆಂಡತಿ ಸೇರಿ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗ ಕಾನು ಮುಂಡಾ ಮನೆಯಲ್ಲಿ ಒಬ್ಬನೇ ಇದ್ದಾಗ ಆತನ ಸೋದರ ಸಂಬಂಧಿ ಸಾಗರ್ ಮುಂಡಾ ಹಾಗೂ ಆತನ ಸ್ನೇಹಿತರು ಅಪಹರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದು ಕೊಲೆಯಾದ ವ್ಯಕ್ತಿಯ ತಂದೆ ದೂರಿನಲ್ಲಿ ಹೇಳಿದ್ದರು. ಕಾನು ಪತ್ತೆಯಾಗದಿದ್ದಾಗ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಕುಂತಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿತ್ತು. ಆರೋಪಿಗಳ ಬಂಧನ ನಂತರ ಕುಮಾಂಗ್ ಗೊಪ್ಲಾ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾದರೆ, ಅಲ್ಲಿಂದ 15 ಕಿ.ಮೀ ದೂರದಲ್ಲಿರುವ ದುಲ್ವಾ ತುಂಗ್ರಿ ಅರಣ್ಯದಲ್ಲಿ ರುಂಡ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚುಂಡಮಣಿ ತುಡು ಹೇಳಿದ್ದಾರೆ.
ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಫೋನ್ ಗಳು, ಮಾರಕಾಸ್ತ್ರಗಳು, ಕೊಡಲಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ತುಂಡು ಭೂಮಿಗಾಗಿ ಆರೋಪಿಗಳು ಮತ್ತು ಕೊಲೆಯಾದ ಯುವಕರ ಕುಟುಂಬದ ಮಧ್ಯೆ ದ್ವೇಷವಿತ್ತು. ಇದೇ ಕಾರಣದಿಂದ ಆತನ ತಲೆ ಕಡಿಯಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
A 20-year-old man allegedly beheaded his 24-year-old cousin after abducting him over a land dispute, after which the friends of the accused even took a selfie with the severed head in Jharkhand's Khunti district, said the police on Monday.Following a complaint by the father of the deceased in Murhu village on Friday, cops arrested six people, including the main accused and his wife.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm