ಬ್ರೇಕಿಂಗ್ ನ್ಯೂಸ್
06-12-22 04:21 pm HK News Desk ಕ್ರೈಂ
ನವದೆಹಲಿ, ಡಿ.6: ಆಸ್ತಿ ವಿವಾದಕ್ಕೆ ಸಂಬಂಧಿಸಿ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಕುಂತಿ ಜಿಲ್ಲೆಯ ಮುರ್ಹು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಡಿಸೆಂಬರ್ 2 ರಂದು ಮೃತನ ತಂದೆ ದೂರು ದಾಖಲಿಸಿದ ನಂತರ ಪ್ರಮುಖ ಆರೋಪಿ, ಆತನ ಹೆಂಡತಿ ಸೇರಿ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗ ಕಾನು ಮುಂಡಾ ಮನೆಯಲ್ಲಿ ಒಬ್ಬನೇ ಇದ್ದಾಗ ಆತನ ಸೋದರ ಸಂಬಂಧಿ ಸಾಗರ್ ಮುಂಡಾ ಹಾಗೂ ಆತನ ಸ್ನೇಹಿತರು ಅಪಹರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದು ಕೊಲೆಯಾದ ವ್ಯಕ್ತಿಯ ತಂದೆ ದೂರಿನಲ್ಲಿ ಹೇಳಿದ್ದರು. ಕಾನು ಪತ್ತೆಯಾಗದಿದ್ದಾಗ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಕುಂತಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿತ್ತು. ಆರೋಪಿಗಳ ಬಂಧನ ನಂತರ ಕುಮಾಂಗ್ ಗೊಪ್ಲಾ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾದರೆ, ಅಲ್ಲಿಂದ 15 ಕಿ.ಮೀ ದೂರದಲ್ಲಿರುವ ದುಲ್ವಾ ತುಂಗ್ರಿ ಅರಣ್ಯದಲ್ಲಿ ರುಂಡ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚುಂಡಮಣಿ ತುಡು ಹೇಳಿದ್ದಾರೆ.
ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಫೋನ್ ಗಳು, ಮಾರಕಾಸ್ತ್ರಗಳು, ಕೊಡಲಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ತುಂಡು ಭೂಮಿಗಾಗಿ ಆರೋಪಿಗಳು ಮತ್ತು ಕೊಲೆಯಾದ ಯುವಕರ ಕುಟುಂಬದ ಮಧ್ಯೆ ದ್ವೇಷವಿತ್ತು. ಇದೇ ಕಾರಣದಿಂದ ಆತನ ತಲೆ ಕಡಿಯಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
A 20-year-old man allegedly beheaded his 24-year-old cousin after abducting him over a land dispute, after which the friends of the accused even took a selfie with the severed head in Jharkhand's Khunti district, said the police on Monday.Following a complaint by the father of the deceased in Murhu village on Friday, cops arrested six people, including the main accused and his wife.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm